ಹೊರ್ತಿ: ಮಹನೀಯರ ತ್ಯಾಗ, ಹೋರಾಟ ತ್ಯಾಗದ ಫಲದಿಂದ ಸ್ವಾತಂತ್ರ್ಯ ದೊರೆತಿದೆ ಎಂದು ಹಡಲಸಂಗ ಶಾಲಾ ಶಿಕ್ಷಕ ಎಸ್ ಎಸ್. ಕಡಿಮನಿ ಹೇಳಿದರು.
ಹೊರ್ತಿಯ ರೇವಣಸಿದ್ಧೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಶಾಲಾ ಅಡಳಿತ ಮಂಡಳಿಯ ವ್ಯವಸ್ಥಾಪಕ ಶಿವಲಿಂಗಪ್ಪ ಅ.ಖೈನೂರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಗುರು ಎಸ್ ಎಸ್.ಕ್ಷತ್ರಿ, ಅಮಿತ ಮೇಡೆಗಾರ, ಅರ್ಜುನ ಬಬಲಾದ ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ, ಮಕ್ಕಳು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.