ADVERTISEMENT

ಮಕ್ಕಳ ಆಸಕ್ತಿಗೆ ಅನುಗುಣವಾದ ಶಿಕ್ಷಣ ನೀಡಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 15:24 IST
Last Updated 7 ಡಿಸೆಂಬರ್ 2022, 15:24 IST
ವಿಜಯಪುರ ನಗರದ  ಎಸ್.ಎಸ್.ಪಿ.ಯು.ಕಾಲೇಜು ಆವರಣದಲ್ಲಿ ಮಾಧ್ಯಮಿಕ ವಿಭಾಗದಲ್ಲಿ ಆರಂಭಿಸಲಾಗಿರುವ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಸುನೀಲಗೌಡ ಪಾಟೀಲ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು. 
ವಿಜಯಪುರ ನಗರದ  ಎಸ್.ಎಸ್.ಪಿ.ಯು.ಕಾಲೇಜು ಆವರಣದಲ್ಲಿ ಮಾಧ್ಯಮಿಕ ವಿಭಾಗದಲ್ಲಿ ಆರಂಭಿಸಲಾಗಿರುವ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಸುನೀಲಗೌಡ ಪಾಟೀಲ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.    

ವಿಜಯಪುರ: ಮಕ್ಕಳ ಆಸಕ್ತಿಗನುಗುಣವಾಗಿ ನವೀನ ಮತ್ತು ಸಂವಹನ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ನಗರದ ಎಸ್.ಎಸ್.ಪಿ.ಯು.ಕಾಲೇಜು ಆವರಣದಲ್ಲಿ ಮಾಧ್ಯಮಿಕ ವಿಭಾಗದಲ್ಲಿ ಆರಂಭಿಸಲಾಗಿರುವ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ನಿಗದಿತ ಪಠ್ಯಕ್ರಮಕ್ಕಿಂತ ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾಗಿ ಶಿಕ್ಷಣ ನೀಡುವುದು ಅಗತ್ಯವಾಗಿದೆ. ಇದಕ್ಕೆ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಪೂರಕವಾಗಿ ಕೆಲಸ ಮಾಡುತ್ತಿವೆ. ಇಂಥ ಲ್ಯಾಬ್‍ಗಳ ಸ್ಥಾಪನೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಹೊಸ ಹೊಸ ಸಂಶೋಧನಾ ಸಾಮರ್ಥ್ಯವನ್ನು ಬೆಳಕಿಗೆ ತರಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ADVERTISEMENT

ವಾಸ್ತವಿಕತೆಗೆ ಹತ್ತಿರವಾಗಿರುವ ಮತ್ತು ಮಕ್ಕಳು ಹೊಂದಿರುವ ಕಲ್ಪನೆಗಳನ್ನು ಜಾರಿ ಮಾಡಲು ಇಂಥ ಲ್ಯಾಬ್‍ಗಳು ಅಗತ್ಯವಾಗಿವೆ. ಹೊಸ ಹೊಸ ಕಲ್ಪನೆಗಳು ಮತ್ತು ಅವುಗಳ ಅನುಷ್ಠಾನಕ್ಕೆ ವಯಸ್ಸು ಅಡ್ಡಿಯಾಗುವುದಿಲ್ಲ. ಇದನ್ನು ಮನಗಂಡು ಬಿ.ಎಲ್.ಡಿ.ಇ. ಸಂಸ್ಥೆಯಿಂದ ವೆಂಚರಾಥಾನ್ ಆಯೋಜಿಸಲಾಗುತ್ತಿದೆ. ಇದರಲ್ಲಿ ಎಲ್ಲ ವಯೋಮಾನದವರು ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದರು.

ಬಿಎಲ್‍ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್.ಬಿ.ಕೊಟ್ನಾಳ ಮಾತನಾಡಿ, ಮಕ್ಕಳಿಗೆ ಇಂಥ ಲ್ಯಾಬ್‍ಗಳಿಂದ ಅವರಲ್ಲಿರುವ ಹೊಸ ಹೊಸ ಆಲೋಚನೆಗಳನ್ನು ಅನುಷ್ಠಾನಕ್ಕೆ ತರಲು ಪ್ರಯೋಜನವಾಗುತ್ತಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಇದರ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು.

ಬಿಎಲ್‍ಡಿಇ ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್.ಪಾಟೀಲ ಮತ್ತು ಡಯಟ್ ಎಟಿಎಲ್ ನೋಡಲ್ ಅಧಿಕಾರಿ ಜಯಪ್ರಕಾಶ ಸೊಡ್ಡಗಿ ಮಾತನಾಡಿದರು.

ಉಪನಿರ್ದೇಶಕಿ ಸಾಯಿರಾಬಾನು ಖಾನ್‌, ಬಿಎಲ್‍ಡಿಇ ಸಂಸ್ಥೆಯ ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಅಧೀಕ್ಷಕ ಎಸ್.ಎ.ಬಿರಾದಾರ, ಎಸ್.ಎಸ್.ಪಿ.ಯು.ಕಾಲೇಜಿನ ಪ್ರಾಚಾರ್ಯ ಜಿ.ಡಿ.ಅಕಮಂಚಿ, ಉಪ ಪ್ರಾಚಾರ್ಯ ಕೆ.ಬಿ.ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.