ADVERTISEMENT

ಕೊರೊನಾ ನಿವಾರಣೆಗೆ ಕ್ರೈಸ್ತರ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 15:18 IST
Last Updated 10 ಏಪ್ರಿಲ್ 2020, 15:18 IST

ವಿಜಯಪುರ: ಜಗತ್ತಿಗೆ ಕಂಟಕಪ್ರಾಯವಾಗಿರುವ ಕೊರೊನಾ ಸೋಂಕನ್ನು ನಿವಾರಿಸುವಂತೆ ಯೇಸುವನ್ನು ಕೋರಿ ಕ್ರೈಸ್ತರು ತಮ್ಮ, ತಮ್ಮ ಮನೆಯಲ್ಲೇ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ‘ಶುಭ ಶುಕ್ರವಾರ’ (ಗುಡ್ ಫ್ರೈಡೆ)ವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಕೊರೊನಾ ಸೋಂಕು ಹರಡುವ ಭೀತಿ ಹಾಗೂ ಲಾಕ್‌ಡೌನ್‌ನಿಂದಾಗಿ ಮುಂಜಾಗ್ರತಾ ಕ್ರಮವಾಗಿ ಚರ್ಚ್‌ಗಳಲ್ಲಿನ ಎಲ್ಲ ಧಾರ್ಮಿಕ ಆಚರಣೆಗಳನ್ನು ರದ್ದುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕ್ರೈಸ್ತರು ಕುಟುಂಬದವರೊಂದಿಗೆ ಮನೆಯಲ್ಲೇ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.

ಕೋವಿಡ್–19ಗೆ ಬಲಿಯಾದವರ ಆತ್ಮಕ್ಕೆ ಶಾಂತಿ ಕೋರಿ ಹಾಗೂ ಕೊರೊನಾ ವಿರುದ್ಧ ಹೋರಾಡುತ್ತಿರುವ ಸರ್ಕಾರಿ ಅಧಿಕಾರಿಗಳು, ವೈದ್ಯರು, ನರ್ಸ್‌ಗಳು ಹಾಗೂ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶುಭ ಹಾರೈಸಿದರು.

ADVERTISEMENT

ಕೊರೊನಾ ಸಂಕಷ್ಟದಿಂದ ಜಗತ್ತಿನ ಜನರನ್ನು ಪಾರು ಮಾಡುವಂತೆಯೂ ಯೇಸುವಿನಲ್ಲಿ ಮೊರೆಯಿಟ್ಟರು.

ಇದೇ ಮೊದಲ ಬಾರಿಗೆ ಕ್ರೈಸ್ತರು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವ ಮೂಲಕ ಗುಡ್‌ ಫ್ರೈಡೆಯನ್ನು ಆಚರಿಸಿರುವುದು ವಿಶೇಷವಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.