ADVERTISEMENT

ಗ್ರಾ.ಪಂ. ಅಧ್ಯಕ್ಷನ ಬರ್ಬರ ಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2018, 18:21 IST
Last Updated 10 ಅಕ್ಟೋಬರ್ 2018, 18:21 IST
 ಗೊಲ್ಲಾಳಪ್ಪ ಹದಗಲ್ಲ
 ಗೊಲ್ಲಾಳಪ್ಪ ಹದಗಲ್ಲ   

ಸಿಂದಗಿ (ವಿಜಯಪುರ): ತಾಲ್ಲೂಕಿನ ಸುಂಗಠಾಣ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗೊಲ್ಲಾಳಪ್ಪ ಬಸಲಿಂಗಪ್ಪ ಹದಗಲ್ಲ (35) ಅವರ ಕತ್ತು ಕುಯ್ದು ಬುಧವಾರ ಮಧ್ಯಾಹ್ನ ಪಟ್ಟಣದಲ್ಲಿ ಕೊಲೆ ಮಾಡಲಾಗಿದೆ.

ಹದಗಲ್ಲ ಅವರು ತಾಲ್ಲೂಕಿನ ಮುರಡಿ ಗ್ರಾಮದವರು. ಗ್ರಾ.ಪಂ. ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಖಾನಾವಳಿಯಲ್ಲಿ ಊಟ ಮಾಡುತ್ತಿದ್ದಾಗ ಬಂದ ಅಪರಿಚಿತರು ಕಣ್ಣಿಗೆ ಕಾರದ ಪುಡಿ ಎರಚಿ, ಅವರನ್ನು ಆಚೆ ಎಳೆದೂಯ್ದು ಜನರ ಎದುರೇ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮೊದಲ ಹೆಂಡತಿಯಿಂದ ದೂರ ಇದ್ದ ಹದಗಲ್ಲ ಅವರು ಬೇರೊಬ್ಬ ಮಹಿಳೆ ಜೊತೆ ಸಂಬಂಧ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದು ಕೊಲೆಗೆ ಕಾರಣವಾಗಿರಬಹುದೇ ಎಂಬ ಸಂಶಯದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗಳು ಯಾರೆಂಬುದು ತಿಳಿದು ಬಂದಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.