ADVERTISEMENT

ವಿಜಯಪುರ | ಹರ್ ಘರ್ ತಿರಂಗಾ ಅಭಿಯಾನ: ತ್ರಿವರ್ಣ ಧ್ವಜ ವಿತರಣೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 15:50 IST
Last Updated 5 ಆಗಸ್ಟ್ 2022, 15:50 IST
ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ತ್ರಿವರ್ಣ ಧ್ವಜ ವಿತರಿಸಲಾಯಿತು
ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ತ್ರಿವರ್ಣ ಧ್ವಜ ವಿತರಿಸಲಾಯಿತು   

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ನಡೆಯಲಿರುವ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ನೇತೃತ್ವದಲ್ಲಿ ಬೆನ್ನುಹುರಿ ಅಪಘಾತ ಪೀಡಿತರಿಗೆ ತ್ರಿವರ್ಣ ಧ್ವಜ ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಉಮೇಶ ಕಾರಜೋಳ ಮಾತನಾಡಿ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆ ಅದ್ಭುತ, ಹಲವಾರು ಜನರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ, ಅವರೆಲ್ಲರ ತ್ಯಾಗದ ಫಲವಾಗಿ ನಾವು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ ದೊರಕಿ 75 ವಸಂತಗಳ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕೈಗೊಳ್ಳಲಾಗುತ್ತಿದೆ, ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ಹೆಮ್ಮೆಯ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಅಭಿಯಾನಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ADVERTISEMENT

ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ತ್ರಿವರ್ಣ ಧ್ವಜ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.