ADVERTISEMENT

ವಿಜಯಪುರ: ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 7:19 IST
Last Updated 1 ಜನವರಿ 2023, 7:19 IST
ಸಿದ್ದೇಶ್ವರ ಸ್ವಾಮೀಜಿ
ಸಿದ್ದೇಶ್ವರ ಸ್ವಾಮೀಜಿ    

ವಿಜಯಪುರ: ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದ್ದಾರೆ.

ಶ್ರೀಗಳ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿರುವುದರಿಂದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಆಶ್ರಮದ ಆವರಣದಲ್ಲಿ ಬೀಡು ಬಿಟ್ಟಿದ್ದಾರೆ.

ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಆಶ್ರಮಕ್ಕೆ ಬಂದಿದ್ದು, ಆತಂಕದ ವಾತಾವರಣ ಮನೆ ಮಾಡಿದೆ. ಸುದ್ದಿ ತಿಳಿದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಶ್ರಮದತ್ತ ದೌಡಾಯಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.