ADVERTISEMENT

ಎಮ್ಮೆಗಳನ್ನು ರಕ್ಷಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿಹೋದ ರೈತ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 10:45 IST
Last Updated 7 ಆಗಸ್ಟ್ 2022, 10:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲ್ಹಾರ (ವಿಜಯಪುರ): ಪಟ್ಟಣ ಸಮೀಪದ ಹಳ್ಳದಲ್ಲಿ ಸಿಲುಕಿಕೊಂಡ ಎಮ್ಮೆಗಳನ್ನು ರಕ್ಷಿಸಲು ಹೋಗಿದ್ದ ರೈತ ನಂದಪ್ಪ ಸಂಗಪ್ಪ ಸೊನ್ನದ (65) ನೀರಿನ ಸೆಳವಿಗೆ ಸಿಲುಕಿ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ.

ಹಳ್ಳದ ಹರಿವಿನಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿದ್ದ ಎಮ್ಮೆಗಳನ್ನು ರಕ್ಷಿಸಲು ಹೋಗಿ ರೈತ ತಾನು ಕೂಡಾ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ಮರಳದ ಕಾರಣ ತಡರಾತ್ರಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT