ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಚಡಚಣ ತಾಲ್ಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಸಾವಿಗೀಡಾಗಿದ್ದಾರೆ.
ಹತ್ತಳ್ಳಿ ಗ್ರಾಮದ ಧರೆಪ್ಪ ಧರ್ಮಪ್ಪ ಬಿರಾದಾರ (45) ಜಾನುವಾರುಗಳಿಗೆ ಮೇವು ತರಲು ಎತ್ತಿನ ಚಕ್ಕಡಿಯಲ್ಲಿ ತೆರಳುತ್ತಿದ್ದಾಗ ಸಿಡಿಲು ಬಡಿದಿದೆ. ರೈತ ಸಾವಿಗೀಡಾದರೂ ಚಕ್ಕಡಿ ಎಳೆಯುತ್ತಿದ್ದ ಜೋಡೆತ್ತಿಗೆ ಯಾವುದೇ ಅಪಾಯವಾಗಿಲ್ಲ.
ಜಿಲ್ಲೆಯ ಸಿಂದಗಿ, ದೇವರಹಿಪ್ಪರಗಿ, ಮುದ್ದೇಬಿಹಾಳ, ಕೊಲ್ಹಾರ, ಬಸವನ ಬಾಗೇವಾಡಿ, ನಾಲತವಾಡದಲ್ಲಿ ಮಳೆಯಾಗಿದೆ.
ಭೀಮಾ ನದಿ ತೀರದ ಪ್ರವಾಹ ತಗ್ಗಿದೆ. ಆದರೆ, ಸಂಕಷ್ಟಕ್ಕೆ ಒಳಗಾಗಿರುವ ಜನರು ಇನ್ನೂ ಕಾಳಜಿ ಕೇಂದ್ರದಲ್ಲೇ ಉಳಿದುಕೊಂಡಿದ್ದಾರೆ. ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.