ADVERTISEMENT

ವಿಜಯಪುರ ಜಿಲ್ಲೆಯಾದ್ಯಂತ ವರುಣನ ಆರ್ಭಟ

ಅಗರಖೇಡ 6.5, ಹಲಸಂಗಿ 5.6 ಸೆಂ.ಮೀ.ಅಧಿಕ ಮಳೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 13:10 IST
Last Updated 6 ಸೆಪ್ಟೆಂಬರ್ 2021, 13:10 IST
ವಿಜಯಪುರ ನಗರದಲ್ಲಿ ಸೋಮವಾರ ಧಾರಾಕಾರವಾಗಿ ಸುರಿಯುವ ಮಳೆಯಲ್ಲೇ ತೆರಳಿದ ಬೈಕ್‌ ಸವಾರ –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ಸೋಮವಾರ ಧಾರಾಕಾರವಾಗಿ ಸುರಿಯುವ ಮಳೆಯಲ್ಲೇ ತೆರಳಿದ ಬೈಕ್‌ ಸವಾರ –ಪ್ರಜಾವಾಣಿ ಚಿತ್ರ   

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಭಾರೀ ಮಳೆ ಸುರಿಯತೊಡಗಿದೆ. ಸೋಮವಾರ ಮಧ್ಯಾಹ್ನ ಆರಂಭವಾದ ಮಳೆ ಎಡಬಿಡದೆ ಸುರಿಯತೊಡಗಿದ್ದು, ಇಡೀ ಜಿಲ್ಲೆ ಮಳೆನಾಡಿನಂತಾಗಿದೆ.

ವಿಜಯಪುರ, ಬಸವನ ಬಾಗೇವಾಡಿ, ತಾಳಿಕೋಟೆ, ದೇವರ ಹಿಪ್ಪರಗಿ, ತಿಕೋಟಾ, ಬಬಲೇಶ್ವರ, ಹೊರ್ತಿ, ಕೊಲ್ಹಾರ, ಇಂಡಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗತೊಡಗಿದೆ.

ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆಗೆ ಸಮಸ್ಯೆಯಾಗುವ ಆತಂಕ ಎದುರಾಗಿದೆ. ಭಾರೀ ಮಳೆಯಿಂದ ಸಹಜ ಜನ ಜೀವನಕ್ಕೆ ಅಡಚಣೆಯಾಯಿತು.

ADVERTISEMENT

ಜಿಲ್ಲೆಯಲ್ಲಿ ಇನ್ನೂ ಎರಡರಿಂದ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ವಿವರ:

ಅಗರಖೇಡದಲ್ಲಿ ಅತೀ ಹೆಚ್ಚು ಅಂದರೆ, 6.5 ಸೆಂ.ಮೀ. ಮಳೆಯಾಗಿದೆ. ಹಲಸಂಗಿ 5.6, ಕನ್ನೂರ 5, ರಾಮನಹಳ್ಳಿ 4.8, ಮಮದಾಪೂರ 4.1, ದೇವರಹಿಪ್ಪರಗಿ 4.7,ಹೋರ್ತಿ 3.8,ಭೂತನಾಳ 3.8,ಇಂಡಿ 3.8,ವಿಜಯಪುರ 2.7, ಬಸವನ ಬಾಗೇವಾಡಿ 1.6, ಮನಗೂಳಿ 3.2, ಹೂವಿನ ಹಿಪ್ಪರಗಿ 1.2, ಮಟ್ಟಿಹಾಳ 1.7, ಹಿಟ್ನಳ್ಳಿ 2.1, ತಿಕೋಟಾ 2.2, ಕುಮಟಗಿ 2.1, ಬಬಲೇಶ್ವರ 1.6, ನಾದ ಬಿ.ಕೆ. 2.4, ಚಡಚಣ 1.8, ಝಳಕಿ 1.6, ಸಿಂದಗಿ 2.6, ಆಲಮೇಲ 2.1, ಸಾಸಾಬಾಳ 1, ಕಡ್ಲೆವಾಡ 3 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.