ವಿಜಯಪುರ:ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಆರಂಭವಾಗಿರುವ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ.
ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಜಿಲ್ಲೆಯಾದ್ಯಂತ ದಟ್ಟವಾದ ನೋಡ ಕವಿದ ವಾತಾವರಣವಿದ್ದು, ಒಮ್ಮೊಮ್ಮೆ ಜೋರಾಗಿ, ಮಗದೊಮ್ಮೆ ತುಂತುರು ಮಳೆ ಸುರಿಯುತ್ತಿದೆ. ಇಡೀ ವಾತಾವರಣ ಶೀತಮಯವಾಗಿದೆ.
ಹೊಲಗಳಲ್ಲಿ ಮಳೆ ನೀರು ನಿಂತಿರುವುದರಿಂದ ತೇವಾಂಶ ಹೆಚ್ಚಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.