ವಿಜಯಪುರ: ಜಿಲ್ಲೆಯಾದ್ಯಂತ ಹೋಳಿ ಹಬ್ಬ ಆಚರಣೆ ಹಿನ್ನೆಲೆ ಮಾ.17 ರಂದು ಬೆಳಿಗ್ಗೆ 6ರಿಂದ ಮಾ. 19ರ ರ ಮಧ್ಯರಾತ್ರಿ 12ರ ವರೆಗೆ ಮತ್ತು ಮಾ.22 ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ರ ವರೆಗೆ ಸಾರಾಯಿ, ಐ.ಎಂ.ಎಲ್ ಮತ್ತು ಎಲ್ಲ ರೀತಿಯ ಅಂಗಡಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಆಚರಿಸುತ್ತಿರುವ ಪ್ರಯುಕ್ತ ಮಾ. 17 ಮತ್ತು 18 ರಂದು ಕಾಮದಹನ ಹಾಗೂ ಮಾ.18 ಮತ್ತು 19 ರಂದು ಧೂಳವಾಡ(ಬಣ್ಣ) ಮತ್ತು ಮಾ.22 ರಂದು ರಂಗಪಂಚಮಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.