ADVERTISEMENT

ಶ್ರೀ ವೆಂಕಟೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 16:17 IST
Last Updated 25 ನವೆಂಬರ್ 2022, 16:17 IST
ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ತಾಲ್ಲೂಕಿನ ಐನಾಪುರ ತಾಂಡಾವರೆಗೆ ಶುಕ್ರವಾರ 1111 ಪೂರ್ಣ ಕುಂಭದೊಂದಿಗೆ ಶ್ರೀ ಬಾಲಾಜಿ ದೇವರ ಮೆರವಣಿಗೆ ನಡೆಯಿತು
ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ತಾಲ್ಲೂಕಿನ ಐನಾಪುರ ತಾಂಡಾವರೆಗೆ ಶುಕ್ರವಾರ 1111 ಪೂರ್ಣ ಕುಂಭದೊಂದಿಗೆ ಶ್ರೀ ಬಾಲಾಜಿ ದೇವರ ಮೆರವಣಿಗೆ ನಡೆಯಿತು   

ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನದಿಂದ ತಾಲ್ಲೂಕಿನ ಐನಾಪುರ ತಾಂಡಾವರೆಗೆ ಶುಕ್ರವಾರ 1111 ಪೂರ್ಣ ಕುಂಭದೊಂದಿಗೆ ಶ್ರೀ ಬಾಲಾಜಿ ದೇವರ ಮೆರವಣಿಗೆ ನಡೆಯಿತು.

ನವೆಂಬರ್‌26 ರಂದು ಶ್ರೀ ವೆಂಕಟೇಶ್ವರ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಹಾಗೂಐನಾಪೂರದ ದುರ್ಗಾದೇವಿ ದೇವಸ್ಥಾನ ಅರ್ಚಕ ರೂಪಸಿಂಗ್ ಮಹಾರಾಜರುಮೂರ್ತಿ ಪ್ರತಿಷ್ಠಾಪನೆ ನೆರವೇರಲಿದ್ದರೆ.

ಕೆಸರಟ್ಟಿ ಶಂಕರಲಿಂಗ ಗುರುಪೀಠದ ಸೋಮಲಿಂಗ ಮಹಾರಾಜಹಾಗೂ ಬುರಣಾಪೂರದ ಆರೂಢ ಆಶ್ರಮದ ಯೋಗೇಶ್ವರಿ ತಾಯಿದೇವಸ್ಥಾನದ ಕಳಸಾರೋಹಣ ನೆರವೇರಲಿದ್ದಾರೆ. ಅರವಿಂದರಾವ ದೇಶಪಾಂಡೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ.

ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಎಂದು ಶ್ರೀ ವೆಂಕಟೇಶ್ವರ ದೇವಸ್ಥಾನದ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.