ವಿಜಯಪುರ: ನಗರದ ಇಬ್ರಾಹಿಂಪುರ ಗೇಟ್ ಹತ್ತಿರ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ರಮೇಶ ಜಿಗಜಿಣಗಿ ಮಂಗಳವಾರ ಪರಿಶೀಲಿಸಿದರು.
ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕಾಗಿ ಸಮಸ್ಯೆಯಾಗುತ್ತಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಕಾಶ ಅಕ್ಕಲಕೋಟಿ, ಸಂಪತ್ ಕುವಳ್ಳಿ, ಸಿದ್ದು ಮಲ್ಲಿಕಾರ್ಜುನ ಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.