ADVERTISEMENT

ಚಡಚಣ | ಪಿಸ್ತೂಲ್‌ ತೋರಿಸಿ ಆಭರಣ ಮಳಿಗೆ ದರೋಡೆ, ವಿದ್ಯಾರ್ಥಿಗೆ ಗುಂಡು

ವಿದ್ಯಾರ್ಥಿ ಕಾಲಿಗೆ ತಗುಲಿದ ಗುಂಡು

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:22 IST
Last Updated 27 ಜನವರಿ 2026, 5:22 IST
ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬಂಗಾರದ ಅಂಗಡಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ,  ಡಿವೈಎಸ್‌ಪಿ ಸದಾಶಿವ ಕಟ್ಟಿಮನಿ, ಸಿಪಿಐ ಪರಶುರಾಮ ಮನಗೂಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬಂಗಾರದ ಅಂಗಡಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ,  ಡಿವೈಎಸ್‌ಪಿ ಸದಾಶಿವ ಕಟ್ಟಿಮನಿ, ಸಿಪಿಐ ಪರಶುರಾಮ ಮನಗೂಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಚಡಚಣ: ತಾಲ್ಲೂಕಿನ ಹಲಸಂಗಿಯಲ್ಲಿ ಸೋಮವಾರ ದುಷ್ಕರ್ಮಿಗಳು ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಚಿನ್ನಾಭರಣದ ಅಂಗಡಿ ದರೋಡೆ ಮಾಡಿದ್ದಾರೆ. ಆತ್ಮಲಿಂಗ ಹೂಗಾರ (18) ಎಂಬ ವಿದ್ಯಾರ್ಥಿಗೆ ಗುಂಡು ತಗುಲಿ ಗಾಯವಾಗಿದೆ.  

‘ಹಲಸಂಗಿ ಮುಖ್ಯರಸ್ತೆಯಲ್ಲಿರುವ ಮಹಾರುದ್ರ ಕಂಚಾಗಾರ ಅವರ ‘ಭೂಮಿಕಾ’ ಜ್ಯುವೆಲ್ಲರಿ ಶಾಪ್‌ಗೆ  ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಬೈಕ್ ಮೇಲೆ ಬಂದು, 205 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ ದೋಚಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರಿಗೆ ತಿಳಿಸಿದರು.

‘ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಅನಿಲ್ ಬಸಣ್ಣ ಗಲಗಲಿ ಮೇಲೆ ದುಷ್ಕರ್ಮಿ ಗುಂಡು ಹಾರಿಸಿದ. ಅದು ಅಂಗಡಿ ಎದುರು ನಿಂತಿದ್ದ ಆತ್ಮಲಿಂಗ ಹೂಗಾರ ಎಂಬುವರ ಬಲಗಾಲಿಗೆ ತಗುಲಿದೆ’ ಎಂದರು. ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿವೆ.

ADVERTISEMENT
ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬಂಗಾರದ ಅಂಗಡಿಯೊಳಗೆ ಪಿಸ್ತೂಲ್‌ ತೋರಿಸಿ  ದರೋಡೆ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಬಂಗಾರದ ಅಂಗಡಿಯೊಳಗೆ ಪಿಸ್ತೂಲ್‌ ತೋರಿಸಿ  ದರೋಡೆ ಮಾಡುತ್ತಿರುವ ದೃಶ್ಯ ಸಿ.ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.