ADVERTISEMENT

ಮುದ್ದೇಬಿಹಾಳ: ಶೈಕ್ಷಣಿಕ ಸಮ್ಮೇಳನ ಫೆ. 28ರಂದು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 19:10 IST
Last Updated 26 ಫೆಬ್ರುವರಿ 2026, 19:10 IST
ಮುದ್ದೇಬಿಹಾಳ ತಾಲ್ಲೂಕಿನ ಶಿಕ್ಷಕರ ಸಂಘದಿಂದ ರಾಜ್ಯ ಸಮ್ಮೇಳನಕ್ಕೆ ತೆರಳಲು ತೀರ್ಮಾನಿಸಿದ ಸಂದರ್ಭದ ಚಿತ್ರ ಅನೇಕ ಶಿಕ್ಷಕರು ಇದ್ದಾರೆ.
ಮುದ್ದೇಬಿಹಾಳ ತಾಲ್ಲೂಕಿನ ಶಿಕ್ಷಕರ ಸಂಘದಿಂದ ರಾಜ್ಯ ಸಮ್ಮೇಳನಕ್ಕೆ ತೆರಳಲು ತೀರ್ಮಾನಿಸಿದ ಸಂದರ್ಭದ ಚಿತ್ರ ಅನೇಕ ಶಿಕ್ಷಕರು ಇದ್ದಾರೆ.   

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ): ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಹಾಗೂ ಸಂಘದ ಸುವರ್ಣ ಮಹೋತ್ಸವ, ಧನ್ಯತಾ ಸಮಾರಂಭ ಫೆ. 28ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜರುಗಲಿದೆ ಎಂದು ಮುದ್ದೇಬಿಹಾಳ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ ಮುದನೂರ, ಪ್ರಧಾನ ಕಾರ್ಯದರ್ಶಿ ಎನ್.ಎಸ್. ತುರುಡಗಿ, ಖಜಾಂಚಿ ಎ.ಎಚ್.ಖಾಜಿ ತಿಳಿಸಿದ್ದಾರೆ.

ಶಿಕ್ಷಕರಿಗೆ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವಕಾಶವಾಗುವಂತೆ ಇಲಾಖೆ ವತಿಯಿಂದ ಒಒಡಿ ಸೌಲಭ್ಯ, ವಸತಿ ಸೌಲಭ್ಯ, ಉಪಹಾರ ಹಾಗೂ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT