ADVERTISEMENT

ವಿಜಯಪುರ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 12:41 IST
Last Updated 28 ಆಗಸ್ಟ್ 2021, 12:41 IST
   

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ನೇಗಿನಾಳ-ಮುಳ್ಳಾಳ ನಡುವೆ ಹರಿಯುವ ಹಳ್ಳದ ಪ್ರವಾಹದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ಕೊಚ್ಚಿಹೋಗಿದ್ದಾರೆ.‌

ವಿಜಯಪುರದಿಂದ ತಮ್ಮ ಊರು ಮುಳ್ಳಾಳಕ್ಕೆ ಬೈಕಿನಲ್ಲಿ ಇಬ್ಬರು ಯುವಕರು ಹೋಗುವಾಗ ಉಕ್ಕಿ ಹರಿಯುತ್ತಿದ್ದ ಹಳ್ಳವನ್ನು ಬೈಕ್‌ ತಳ್ಳಿಕೊಂಡು ದಾಟುವಾಗ ಪ್ರವಾಹಕ್ಕೆ ಸಿಲುಕಿದ್ದಾರೆ. ಬೈಕ್ ಸವಾರ ಇಮಾಮ್ ನದಾಫ್ ಪಾರಾಗಿದ್ದು, ಹಿಂಬದಿ ಸವಾರ ಮಂಜುನಾಥ ಪಾಟೀಲ(23) ಕೊಚ್ಚಿ ಹೋಗಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಮನಗೂಳಿ ಪೊಲೀಸ್ ಠಾಣೆ ಪಿಎಸ್ಐ ಆರ್.ಬಿ.ಮಮದಾಪೂರ ಹಾಗೂ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಹಶೀಲ್ದಾರ್‌ ಎಂ.ಎನ್.ಬಳಿಗಾರ, ತಾ.ಪಂ ಅಧಿಕಾರಿ ಭಾರತಿ ಚಲುವಯ್ಯ ಭೇಟಿ ಕಾರ್ಯಾಚರಣೆಯನ್ನು ವೀಕ್ಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.