ADVERTISEMENT

ತೋಂಟದಶ್ರೀ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 11:42 IST
Last Updated 11 ಮಾರ್ಚ್ 2023, 11:42 IST
ಶಂಕರ ಬೈಚಬಾಳ
ಶಂಕರ ಬೈಚಬಾಳ   

ವಿಜಯಪುರ: ಸಾಹಿತಿ ಶಂಕರ ಬೈಚಬಾಳ ವಿರಚಿತ ‘ಕನ್ನಡದ ಮಠ ಪುಸ್ತಕ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಶ್ರೀಗಳು’ ಕೃತಿಗೆ 2021ನೇ ಸಾಲಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಗಂಗಮ್ಮ ಶ್ರೀ ಟಿ.ಶಿವಣ್ಣ ದತ್ತಿ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು ₹5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದ್ದು, ಮಾರ್ಚ್‌ 12 ರಂದು ಬೆಂಗಳೂರಿನಲ್ಲಿ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಕೇಂದ್ರ ಕಸಾಪ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT