ADVERTISEMENT

ವಿಜಯಪುರ | ಕೆ.ಎಚ್. ಸೋಮಾಪೂರಗೆ ಕಸಾಪ ದತ್ತಿ ಸಾಹಿತ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2023, 14:18 IST
Last Updated 8 ಆಗಸ್ಟ್ 2023, 14:18 IST
ಸೋಮಾಪೂರ
ಸೋಮಾಪೂರ    

ಸಿಂದಗಿ: ಪಟ್ಟಣದ ಪದ್ಮರಾಜ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಕೆ.ಎಚ್. ಸೋಮಾಪೂರ ಅವರ ‘ಪತಂಗ ಸಣ್ಣ ಕತೆಗಳ’ ಸಂಕಲನಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಸಮೀರವಾಡಿ ಕನ್ನಡ ಸಾಹಿತ್ಯ ಸಮ್ಮೇಳನದ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ.

ಸೋಮಾಪೂರ ಅವರು ಎರಡು ಕವನ ಸಂಕಲನ, ಮೂರು ಕಥಾ ಸಂಕಲನ, ಚಿಂತನ ಕೃತಿ, ಏಕಾಂಕ ನಾಟಕ, ಕಾದಂಬರಿ ಗಳನ್ನು ಪ್ರಕಟಿಸಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸಮಾಜಮುಖಿ ಕಾರ್ಯ ಮಾಡಿದ್ದಾರೆ. ಸದ್ಯ ಪಿಇಎಸ್ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT