ADVERTISEMENT

ವಿಜಯಪುರ: ವಿಷ ಹಾಕಿ 20ಕ್ಕೂ ಹೆಚ್ಚು ಬೀದಿನಾಯಿಗಳ ಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 16:24 IST
Last Updated 2 ಡಿಸೆಂಬರ್ 2023, 16:24 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ವಿಜಯಪುರ: ನಗರದ ಬಡಿ ಕಮಾನ್‌ ಬಳಿ ಇತ್ತೀಚೆಗೆ ಬಾಲಕನ ಮೇಲೆ ದಾಳಿ ನಡೆಸಿದ್ದ ಬೀದಿ ನಾಯಿಗಳಿಗೆ ಶನಿವಾರ ದುಷ್ಕರ್ಮಿಗಳು ಆಹಾರದಲ್ಲಿ ವಿಷ ಬೆರೆಸಿ, ಉಣಿಸಿದ ಪರಿಣಾಮ 20ಕ್ಕೂ ಹೆಚ್ಚು ಬೀದಿ ನಾಯಿಗಳು ಸಾವಿಗೀಡಾಗಿವೆ.

ವಿಷ ಆಹಾರ ತಿಂದು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹಲವು ಬೀದಿ ನಾಯಿಗಳಿಗೆ ಪ್ರಾಣಿ ಪ್ರೇಮಿಗಳು ಪಶು ವೈದ್ಯರನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.

ADVERTISEMENT

ಆಹಾರದಲ್ಲಿ ಯಾರು ವಿಷ ಬೆರಸಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ.  ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯಿಂದ ಈಗಾಗಲೇ ಅವುಗಳನ್ನು ಸೆರೆಹಿಡಿದು, ಬೇರೆಡೆಗೆ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸಿದ್ದು, ಈ ನಡುವೆ  ವಿಷ ಉಣಿಸಿ ಸಾಯಿಸಿರುವುದು ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.