ADVERTISEMENT

ಕೂಡ್ಲಿಗಿ: ಕೆರೆಯಲ್ಲಿ ಹೂಳೆತ್ತುವಾಗ ನರೇಗಾ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 7:21 IST
Last Updated 26 ಏಪ್ರಿಲ್ 2021, 7:21 IST

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಹುರಳಿಹಾಳ್ ಗ್ರಾಮದ ಕೆರೆಯಲ್ಲಿ ಹೂಳೆತ್ತುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಚಂದ್ರಪ್ಪ(36) ಸೋಮವಾರ ಬೆಳಿಗ್ಗೆ ಎದೆ ನೋವಿನಿಂದ ಮೃತಪಟ್ಟಿದ್ದಾರೆ.

ಚಂದ್ರಪ್ಪ ಸೋಮವಾರ ಬೆಳಿಗ್ಗೆ ಕೆರೆಯಲ್ಲಿ ಹೂಳೆತ್ತುವ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎದೆ ನೋವಿನಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕ್ಕಜೋಗಿಹಳ್ಳಿ ಸಮುದಾಯ‌ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮಾರ್ಗಮಧ್ಯೆಯೇ ಜೀವ ಹೋಗಿದೆ ಎಂದು ವೈದ್ಯರು ತಿಳಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕೆಲಸ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.