ADVERTISEMENT

ಲ್ಯಾಪ್‌ಟಾಪ್ ವಿತರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 15:38 IST
Last Updated 5 ಸೆಪ್ಟೆಂಬರ್ 2019, 15:38 IST
ವಿಜಯಪುರದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಶಾಸಕ ಬಸನಗೌಡ ಪಾಟೀಲ ವಿದ್ಯಾರ್ಥಿಗೆ ಲ್ಯಾಪ್‌ಟಾಪ್ ವಿತರಿಸಿದರು
ವಿಜಯಪುರದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಶಾಸಕ ಬಸನಗೌಡ ಪಾಟೀಲ ವಿದ್ಯಾರ್ಥಿಗೆ ಲ್ಯಾಪ್‌ಟಾಪ್ ವಿತರಿಸಿದರು   

ವಿಜಯಪುರ: ಮಹಾನಗರ ಪಾಲಿಕೆಯ ನೌಕರರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಶ್ರೀ ಗಜಾನನ ಮಹೋತ್ಸವ ಹಾಗೂ ಅಂಧ ಮಕ್ಕಳಿಗೆ ಇಂಟರ್‌ಪಾಯಿಂಟ್‌ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇಂಟರ್‌ಪಾಯಿಂಟ್, ಬ್ಲೆಜರ್ ವಿತರಿಸಿದರು.

ಮಲ್ಲಿಕಾರ್ಜುನ ನಗರದ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳಿಗೆ ಇಂಟರ್‌ಪಾಯಿಂಟ್, ಪ್ರವಾಹ ಪೀಡಿತ ಜನರಿಗೆ ನೌಕರರ ಸಂಘದಿಂದ ಸಂಗ್ರಹಿಸಿದ ₹21 ಸಾವಿರ ಚೆಕ್, ಶಾಸಕರ ಕೋಟಾದಡಿಯಲ್ಲಿ ಎಸ್‌ಸಿ, ಎಸ್‌ಟಿ ಫಲಾನುಭವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು.

ಪಾಲಿಕೆ ಆಯುಕ್ತ ಡಾ.ಔದ್ರಾಮ, ಎಂ.ಎಸ್.ಕರಡಿ, ಉಮೇಶ ವಂದಾಲ, ಶಿವಾನಂದ ಬುಯ್ಯಾರ, ವಿಜುಗೌಡ ಪಾಟೀಲ, ಶೀತಲಕುಮಾರ ಓಗಿ, ಪಾಂಡು ಸಾಹುಕಾರ ದೊಡ್ಡಮನಿ, ರಾಜೇಶ್ವರಿ ಚಲವಾದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.