ವಿಜಯಪುರ: ಜಿಲ್ಲಾ ವಕೀಲರ ಸಂಘ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಿ.ಎಲ್.ಡಿ.ಇ ಆಸ್ಪತ್ರೆ, ಜಿಲ್ಲಾಆರೋಗ್ಯ ಇಲಾಖೆ ಹಾಗೂ ಶಂಕರ್ ಹೃದಯಾಲಯ ಆಶ್ರಯದಲ್ಲಿಜಿಲ್ಲಾಸೆಷನ್ಸ್ ಕೋರ್ಟ್ ಆವರಣದವಕೀಲರ ಭವನದಲ್ಲಿ ವಕೀಲರ ದಿನಾಚರಣೆಯ ಅಂಗವಾಗಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ರಕ್ತದಾನ ಶಿಬಿರದಲ್ಲಿ 30 ಕ್ಕೂ ಹೆಚ್ಚು ವಕೀಲರು ರಕ್ತದಾನ ಮಾಡಿದರು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 300 ಕ್ಕೂ ಹೆಚ್ಚು ವಕೀಲರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಹಿರಿಯ ವಕೀಲ ಎಂ.ಜಿ.ಮಠಪತಿ ಅವರು ವಕೀಲರ ದಿನಾಚರಣೆ ಕುರಿತು ಮಾತನಾಡಿದರು.
ಜಿಲ್ಲಾ ಒಂದನೇಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ ಎಲ್.ಪಿ,ವಿಜಯಪುರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಈರಣ್ಣ ಜಿ ಚಾಗಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುರೇಶ ಚೌಹಾಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎಲ.ಲಕ್ಕಣ್ಣವರ, ಹೃದಯರೋಗತಜ್ಞ ಡಾ.ಶಂಕರಗೌಡ ಬಿ ಪಾಟೀಲ(ಯಾಳಗಿ), ಡಾ.ಅಯ್ಯನಗೌಡ ಬಿರಾದಾರ, ಸಂಘದ ಉಪಾಧ್ಯಕ್ಷ ಎಸ್.ಬಿ.ಜಾಗೀರದಾರ, ಗೌರವ ಕಾರ್ಯದರ್ಶಿ ಎ.ಎಚ್.ಜೈನಾಪೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.