ವಿಜಯಪುರ: ಪತ್ನಿಯ ಶೀಲ ಶಂಕಿಸಿ ಕೊಂದ ಪತಿಗೆ ಜಿಲ್ಲಾ ಸೆಷನ್ಸ್ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ಮತ್ತು ₹ 25 ಸಾವಿರ ದಂಡ ವಿಧಿಸಿದೆ.
2019ರ ಮಾರ್ಚ್ 5ರಂದು ನಗರದ ಗಾಂಧಿ ಚೌಕ ಪೊಲೀಸ್ ಠಾಣೆ ವ್ಯಾಪ್ತಿಯ ಕಾಸಗೇರಿ ಓಣಿಯಲ್ಲಿ ಸೋನಾಬಾಯಿ ಅವರನ್ನು ಆಕೆಯ ಪತಿ ಮಲ್ಲಿಕಾರ್ಜುನ ಪವಾರ ಶೀಲ ಶಂಕಿಸಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದನು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ ಎಂದು ಸರ್ಕಾರಿ ಅಭಿಯೋಜಕ ಬಿ.ಡಿ.ಬಾಗವಾನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.