ವಿಜಯಪುರ: ಬಡತನದಲ್ಲಿಯೇ ಹುಟ್ಟಿ ಬಡತನಲ್ಲಿಯೇ ಬೆಳೆದು, ಕೊನೆಗೆ ಬಡತನದಲ್ಲಿಯೇ ನಿಧನರಾದ ಭಾರತದ ಏಕೈಕ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಆಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಾಂಧೀಜಿ, ಶಾಸ್ತ್ರೀಜಿಯವರು ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಗಾಂಧೀಜಿಯವರು ಅಹಿಂಸಾವಾದಿಯಾಗಿದ್ದರು, ಸ್ವಚ್ಛತೆಗೆ ಬಹಳ ಮಹತ್ವ ನೀಡಿದ್ದರು ಎಂದರು.
ಮಾಜಿ ಶಾಸಕ ರಮೇಶ ಭೂಸನೂರ, ಮುಖಂಡ ವಿಜುಗೌಡ ಪಾಟೀಲ, ರಾಹುಲ ಜಾಧವ, ಮಲ್ಲಿಕಾರ್ಜುನ ಗಡಗಿ, ಎಸ್.ಎ. ಪಾಟೀಲ, ಈರಣ್ಣ ರಾವೂರ, ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ಶಂಕರ ಹೂಗಾರ, ಲಕ್ಷ್ಮಿ ಕನ್ನೊಳ್ಳಿ, ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಸಂಜಯ ಪಾಟೀಲ ಕನಮಡಿ, ಗುರುಲಿಂಗಪ್ಪ ಅಂಗಡಿ, ಕೃಷ್ಣಾ ಗುನಾಳಕರ, ಮಲ್ಲಮ್ಮ ಜೋಗೂರ, ಮಧು ಪಾಟೀಲ, ರಾಜ ಲಕ್ಷ್ಮಿ, ನೀತಾ ದೇಸಾಯಿ, ಗೀತಾ ಚೌಧರಿ, ಸುಸ್ಮೀತಾ ವಾಂಡಕರ, ಸೈನಾಜ, ರೂಗಿ ಮಠ, ಸುವರ್ಣಾ ಕುರ್ಲೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.