ವಿಜಯಪುರ: ಕಳೆದ ಬಾರಿ 14ನೇ ಸ್ಥಾನದಲ್ಲಿದ್ದ ಜಿಲ್ಲೆಯ ಪಿಯುಸಿ ಫಲಿತಾಂಶ ಈ ಬಾರಿ ಕಡೆಯ ಸ್ಥಾನದಲ್ಲಿರುವುದು ತುಂಬಾ ಶೋಚನೀಯ ಎಂದು ಶಾಸಕ ಎಂ.ಬಿ.ಪಾಟೀಲ ಹೇಳಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾಗಿರುವ ‘ಉಪನ್ಯಾಸಕರ ಕೊರತೆ; ಪ್ರಪಾತಕ್ಕೆ ಕುಸಿದ ಫಲಿತಾಂಶ’ ವಿಶೇಷ ವರದಿಯನ್ನು ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಅವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರವು ಎಚ್ಚೆತ್ತುಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಉಪನ್ಯಾಸಕರ ನೇಮಕಾತಿ ಆದೇಶ ದೊರಕದೆ; ಕಾಲೇಜುಗಳಲ್ಲಿ ಅರ್ಧದಷ್ಟು ಉಪನ್ಯಾಸಕರ ಕೊರತೆ ಇದೆ. ಸಮರ್ಪಕ ಬೋಧನೆಯಿಲ್ಲದಿರುವುದೇ ಈ ಫಲಿತಾಂಶಕ್ಕೆ ಮುಖ್ಯ ಕಾರಣವಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.