ADVERTISEMENT

ಬಿಜೆಪಿಗೆ ಹೋಗಿ ದಾರಿ ತಪ್ಪಿದ ಕುಮಾರಸ್ವಾಮಿ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 12:02 IST
Last Updated 14 ಏಪ್ರಿಲ್ 2024, 12:02 IST
   

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ದಾರಿ ತಪ್ಪಿದ್ದಾರೆ. ಅವರು ದಾರಿ ತಪ್ಪಿರುವುದರಿಂದ ಉಳಿದವರಿಗೂ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದರೆ ಏನರ್ಥ. ಕುಮಾರಸ್ವಾಮಿ ಅವರು ತಮ್ಮ ಮಾತಿನ ಒಳಾರ್ಥವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಗೃಹ ಲಕ್ಷ್ಮಿ ಹಣದಿಂದ ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುವುದು, ಒಳ್ಳೆಯ ಬಟ್ಟೆ ಹಾಕಿಕೊಳ್ಳುತ್ತಿರುವುದು, ಹಸಿದ ಹೊಟ್ಟೆಗೆ ಅನ್ನಭಾಗ್ಯದಿಂದ ಮೂರು ಹೊತ್ತು ಊಟ ಸಿಗುತ್ತಿರುವುದು, ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಮಧ್ಯಮ ಕುಟುಂಬಗಳು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮನೆ ನಡೆಸುತ್ತಿರುವುದು ಕುಮಾರಸ್ವಾಮಿ ಅವರ ಪ್ರಕಾರ ದಾರಿ ತಪ್ಪಿದಹಾಗೆಯೇ ಎಂದು ಪ್ರಶ್ನಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.