ADVERTISEMENT

ಶಾಸಕ ಯತ್ನಾಳ‌ ಗಡಿಪಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 15:48 IST
Last Updated 23 ಆಗಸ್ಟ್ 2021, 15:48 IST

ವಿಜಯಪುರ: ಮತೀಯ ಭಾವನೆಗಳಿಗೆ ಧಕ್ಕೆ ತರುವ, ಸಮಾಜದಲ್ಲಿ ಗಲಭೆಗೆ ಕಾರಣವಾಗುವ ಹಾಗೂ ಒಂದು ಕೋಮನ್ನು ಪದೇಪದೇ ನಿಂದನೆ ಮಾಡುವ, ಸಂವಿಧಾನಬಾಹಿರ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.

ಯತ್ನಾಳ್ ಹೇಳಿಕೆಗಳು ಕಾನೂನು ಬಾಹಿರ ಹಾಗೂ ದೇಶ ವಿರೋಧಿ ಆಗಿವೆ. ಅರಾಜಕ ಹೇಳಿಕೆ ನೀಡಿ ಸಮಾಜದ ಶಾಂತಿ ಭಂಗ ಮಾಡುತ್ತಿರುವ ಯತ್ನಾಳ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಬೇಕು. ಯತ್ನಾಳರ ದೇಶ ವಿರೋಧಿ ಹೇಳಿಕೆಗಳಿಗೆ ಸರ್ಕಾರದ ಮೌನ ವಹಿಸಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಸ್ಥಿತಿಯಲ್ಲಿದೆ ಎನ್ನುವುದನ್ನು ತೋರಿಸುತ್ತಿದೆ ಎಂದರು.

ADVERTISEMENT

ವಿಪಕ್ಷಗಳಿಗೆ, ಸ್ವಾಮೀಜಿಗಳಿಗೆ, ಅಲ್ಪಸಂಖ್ಯಾತರಿಗೆ ಈ ರೀತಿ ನಿಂದನೆ ಮಾಡುತ್ತಿರುವ ಯತ್ನಾಳಗೆ ರಾಜ್ಯದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಆರಾಜಕತೆ ಸೃಷ್ಟಿಯಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.