ADVERTISEMENT

ಪರಿಷತ್‌ ಚುನಾವಣೆ: ಕಾಂಗ್ರೆಸ್‌ನಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 12:48 IST
Last Updated 23 ಏಪ್ರಿಲ್ 2021, 12:48 IST

ವಿಜಯಪುರ: ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ2022ರ ಜೂನ್‌ನಲ್ಲಿ ನಡೆಯಲಿರುವಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳಾಗ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

‌ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಿರ್ದೇಶನದ ಮೇರೆಗೆಪಕ್ಷದ ನಿಷ್ಠಾವಂತ ಕಾರ್ಯಕರ್ತರು 2021 ಮೇ 12ರ ಒಳಗಾಗಿ ಅರ್ಜಿಗಳನ್ನು ಭರ್ತಿಮಾಡಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಲ್ಲಿಸಬಹುದಾಗಿದೆ.

ಕಾಂಗ್ರೆಸ್ ಪಕ್ಷವು ಈ ಎರಡು ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ಪಣ ತೊಟ್ಟಿದ್ದು. ಈಗಿನಿಂದಲೇ ಕಾರ್ಯೋನ್ಮುಖವಾಗಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಶತಸಿದ್ಧವಾಗಿದೆ ಎಂದುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಕೀರ್ ಸನದಿ ಹಾಗೂ ಜಿಲ್ಲಾಧ್ಯಕ್ಷ ರಾಜು ಆಲಗೂರ ತಿಳಿಸಿದ್ದಾರೆ.

ADVERTISEMENT

ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು. ಪದವೀಧರರು, ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಲು ಸಂಪೂರ್ಣ ವಿಫಲವಾಗಿದೆ ಎಂದು ಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.