ADVERTISEMENT

ಹೆರಿಗೆ ವೇಳೆ ಬಾಣಂತಿ, ಮಗು ಸಾವು: ಪೋಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 16:46 IST
Last Updated 18 ಜುಲೈ 2020, 16:46 IST

ವಿಜಯಪುರ: ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪೋಷಕರು ಶನಿವಾರ ಪ್ರತಿಭಟನೆ ನಡೆಸಿದರು.

ಇಂಡಿ ಪಟ್ಟಣದ ಕವಿತಾ ಆನಂದ ಅಂಜುಟಗಿ(24) ಶುಕ್ರವಾರ ಸಂಜೆ ಹೆರಿಗೆ ಸಂಬಂಧ ವಿಜಯಪುರ ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಳಿಗ್ಗೆ ಹೆರಿಗೆ ವೇಳೆಯಲ್ಲಿ ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ. ನಂತರ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರಗೆ ತೆಗೆಯುವ ವೇಳೆಯಲ್ಲಿ ತಾಯಿ ಸಹ ಮೃತಪಟ್ಟಿದ್ದಾರೆ ಎಂದು ಪೋಷಕರು ತಿಳಿಸಿದರು.

ಗಾಂಧಿಚೌಕ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.