ಸಾವು
ಪ್ರಾತಿನಿಧಿಕ ಚಿತ್ರ
ಮುದ್ದೇಬಿಹಾಳ: ಡಿಸೇಲ್ ತುಂಬಿಕೊಂಡು ಹೋಗುವ ಟ್ಯಾಂಕರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಗಂಗೂರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಮಹೆಬೂಬ ನಗರದಲ್ಲಿ ವಾಸಿಸುತ್ತಿದ್ದ ಮೂಲತಃ ಹುನಗುಂದ ತಾಲ್ಲೂಕು ಮರೋಳ ಗ್ರಾಮದ ನಿವಾಸಿ ಅಮೀನಸಾಬ ಹುಸೇನಸಾಬ ಸೋಮಲಾಪುರ(52) ಮೃತರು.
ಇಂಧನ ಸಾಗಿಸುವ ಟ್ಯಾಂಕರ್ ವಾಹನದ ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಮೃತರ ಪುತ್ರ ನಬಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.