ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧನ ಕೊಲೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 14:35 IST
Last Updated 28 ಸೆಪ್ಟೆಂಬರ್ 2020, 14:35 IST
ಶಾಂತಪ್ಪ ಈರಪ್ಪ ತೊರವಿ
ಶಾಂತಪ್ಪ ಈರಪ್ಪ ತೊರವಿ   

ವಿಜಯಪುರ: ತಾಲ್ಲೂಕಿನ ಡೋಮನಾಳ ಗ್ರಾಮದ ತೋಟದಲ್ಲಿ ವ್ಯಕ್ತಿಯೊಬ್ಬರನ್ನು ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಡೋಮನಾಳ ಗ್ರಾಮದ ನಿವಾಸಿ ಶಾಂತಪ್ಪ ಈರಪ್ಪ ತೊರವಿ(65) ಕೊಲೆಯಾದ ವ್ಯಕ್ತಿ. ತೋಟದಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.