ADVERTISEMENT

ಅಭಿವೃದ್ಧಿ ನಿರ್ಲಕ್ಷ್ಯ: ಚುನಾವಣಾ ಬಹಿಷ್ಕಾರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:04 IST
Last Updated 2 ಸೆಪ್ಟೆಂಬರ್ 2024, 16:04 IST
ಸಿಂದಗಿಯ 11ನೆಯ ವಾರ್ಡ್‌ನಲ್ಲಿ ಅಭಿವೃದ್ದಿ ಕಾರ್ಯ ನಿರ್ಲಕ್ಷ್ಯ ಖಂಡಿಸಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸದಸ್ಯೆ ವಿಜಯಲಕ್ಷ್ಮೀ ಗಿರೀಶ ನಾಗೂರ ಪುರಸಭೆ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು
ಸಿಂದಗಿಯ 11ನೆಯ ವಾರ್ಡ್‌ನಲ್ಲಿ ಅಭಿವೃದ್ದಿ ಕಾರ್ಯ ನಿರ್ಲಕ್ಷ್ಯ ಖಂಡಿಸಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸದಸ್ಯೆ ವಿಜಯಲಕ್ಷ್ಮೀ ಗಿರೀಶ ನಾಗೂರ ಪುರಸಭೆ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು   

ಸಿಂದಗಿ: ಪಟ್ಟಣದ 11ನೆಯ ವಾರ್ಡ್ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದರಿಂದ ಸೆ.9ರಂದು ನಡೆಯಲಿರುವ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಸದಸ್ಯೆ ವಿಜಯಲಕ್ಷ್ಮೀ ಗಿರೀಶ ನಾಗೂರ ಎಚ್ಚರಿಸಿದರು.

ಇಲ್ಲಿಯ ಪುರಸಭೆ ಕಾರ್ಯಾಲಯದಲ್ಲಿ ಸೋಮವಾರ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ ಅವರು, 11ನೆಯ ವಾರ್ಡ್‌ ಮೂಲ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಮಾಡುವಂತೆ ಕಳೆದ ನಾಲ್ಕು ವರ್ಷಗಳಿಂದ ಕೇಳುತ್ತಲೇ ಬಂದಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. 2021 ರಿಂದ ಈ ವರೆಗೂ ಪುರಸಭೆ ಕಾರ್ಯಾಲಯದಲ್ಲಿ ಪ್ರತಿ ಮಾಸಿಕ ಜಮಾ-ಖರ್ಚಿನ ಮಾಹಿತಿ ಮತ್ತು 11ನೆಯ ವಾರ್ಡ್‌ಗೆ ಮಾಡಲಾಗಿರುವ ಒಟ್ಟು ಖರ್ಚಿನ ವಿವರ ನೀಡುವಂತೆ ಸಾಕಷ್ಟು ಬಾರಿ ಲಿಖಿತವಾಗಿ ಕೇಳಿಕೊಂಡಿದ್ದರೂ ವಿವರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT