ವಿಜಯಪುರ: ಕಂಟೈನ್ಮೆಂಟ್ ವಲಯದ ಸಂಪರ್ಕದಿಂದ ಕೋವಿಡ್-19 ತಗುಲಿರುವ ಬಗ್ಗೆ ದೃಢಪಟ್ಟ ನಗರದ ಶಾಪೇಟೆಗಲ್ಲಿಯ 52 ವರ್ಷ ವಯಸ್ಸಿನ ನಿವಾಸಿ (ಪಿ12139) ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆದಲ್ಲಿ ಜೂನ್ 27 ರಂದು ಸಾವನ್ನಪ್ಪಿದ್ದಾರೆ. ಇವರ ಗಂಟಲು ದ್ರವ ಮಾದರಿಯನ್ನು ಈ ಹಿಂದೆಯೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಸಾವಿನ ನಂತರ ಬಂದ ವರದಿಯನ್ವಯ ಈ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 10 ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ.
ಮತ್ತೆ 39 ಜನರಿಗೆ ಕೋವಿಡ್:ಗುರುವಾರ ಜಿಲ್ಲೆಯಲ್ಲಿ 39 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 466ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಜನ ಗುಣಮುಖರಾಗಿ ಗುರುವಾರ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಇದುವರೆಗೆ 322 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.