ವಿಜಯಪುರ: ಇಲ್ಲಿನ ದರ್ಗಾ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗೆ ಚಿಕನ್ ಪೀಸ್ನಲ್ಲಿ ಗಾಂಜಾ ಅಡಗಿಸಿಟ್ಟು ಪೂರೈಕೆ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಜೈಲಿನಲ್ಲಿರುವ ಕೈದಿಗೆ ನೀಡಲು ತೆಗೆದುಕೊಂಡು ಹೋಗಿದ್ದ ಊಟವನ್ನು ಪರಿಶೀಲಿಸುವಾಗ ಚಿಕನ್ ಪೀಸ್ ಒಳಗೆ ಗಾಂಜಾವನ್ನು ಹುದುಗಿಸಿಟ್ಟಿರುವುದು ಪತ್ತೆಯಾಗಿದೆ.
ಕೈದಿ ಶಾರುಕ್ ಖಾನ್ ತೊಗರಿತಿಪ್ಪಿ ಎಂಬಾತನಿಗೆ ಪ್ರಜ್ವಲ್ ಎಂಬಾತ ಊಟದೊಂದಿಗೆ ಗಾಂಜಾ ಪೂರೈಕೆ ಮಾಡುವಾಗ ಸಿಕ್ಕಿಬಿದ್ದಿದ್ದಾನೆ.
ದೊಡ್ಡ, ದೊಡ್ಡ ಚಿಕನ್ ಪೀಸ್ನಲ್ಲಿ 2 ಗ್ರಾಂನಷ್ಟು ಇರುವ ಗಾಂಜಾ ಇರಿಸಲಾಗಿತ್ತು.ಒಟ್ಟು 18 ಗಾಂಜಾ ಪ್ಯಾಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ವಿರುದ್ಧಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.