ADVERTISEMENT

ವಂದೇ ಮಾತರಂ ಹೇಳದಿದ್ದರೆ ದೇಶ ಬಿಟ್ಟು ಹೋಗಿ: ಪ್ರಮೋದ್ ಮುತಾಲಿಕ್

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 2:37 IST
Last Updated 16 ಫೆಬ್ರುವರಿ 2026, 2:37 IST
ವಿಜಯಪುರದ ಶಿವಾನುಭವ ಮಂಟಪದಲ್ಲಿ ಸ್ವರಾಜ್ಯ ಸೇನಾ ನೇತೃತ್ವದಲ್ಲಿ ನಡೆದ ಹಿಂದೂ ಸಮಾವೇಶವನ್ನು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಮಾತನಾಡಿದರು.
ವಿಜಯಪುರದ ಶಿವಾನುಭವ ಮಂಟಪದಲ್ಲಿ ಸ್ವರಾಜ್ಯ ಸೇನಾ ನೇತೃತ್ವದಲ್ಲಿ ನಡೆದ ಹಿಂದೂ ಸಮಾವೇಶವನ್ನು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಮಾತನಾಡಿದರು.   

ವಿಜಯಪುರ: ಕೆಲವು ಮುಸ್ಲಿಮರು ವಂದೇ ಮಾತರಂ ಗೀತೆ ಹೇಳಲು ಒಪ್ಪುತ್ತಿಲ್ಲ, ವಂದೇ ಮಾತರಂ ಹೇಳದೇ ಹೋದರೆ ಅವರು ದೇಶ ಬಿಟ್ಟು ಹೋಗಬಹುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದ ಶಿವಾನುಭವ ಮಂಟಪದಲ್ಲಿ ಸ್ವರಾಜ್ಯ ಸೇನಾ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಶನಿವಾರ ಸಂಘಟಿಸಲಾಗಿದ್ದ ಹಿಂದೂ ಸಮಾವೇಶ ಹಾಗೂ ಸಂಭಾಜಿ ಮಹಾರಾಜರ ಪುಸ್ತಕ ಲೋಕಾರ್ಪಣೆ ನೇರವೇರಿಸಿ ಮಾತನಾಡಿದ ಅವರು, ಮುಸ್ಲಿಂರಿಗೆ ತೊಂದರೆಯಾಗುತ್ತದೆ ಎಂದು ದೇಶಾಭಿಮಾನದ ಕ್ರಾಂತಿಗೀತೆಯಾಗಿದ್ದ ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ದ್ರೋಹ ಬಗೆಯಿತು .

ಮನಗೂಳಿ ಹಿರೇಮಠದ ಶ್ರೀ ಗುರು ಸಂಗನಬಸವ ಶಿವಾಚಾರ್ಯರು, ಹೋರಾಟಗಾರ ರಮೇಶ ಬಿದನೂರ, ವಿಡಿಎ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂ.ಗು. ಸಜ್ಜನ ಮೊದಲಾದವರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.