ADVERTISEMENT

ಮಳೆ ಹಾನಿ: ಶಾಸಕ ಚವ್ಹಾಣ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 13:37 IST
Last Updated 17 ಮೇ 2021, 13:37 IST
ವಿಜಯಪುರ ನಗರದ ವಾರ್ಡ್ 15ರ ಖಾವಿ ಪ್ಲಾಟ್‌ನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಯಾಗಿರುವುದನ್ನು ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಪರಿಶೀಲಿಸಿದರು
ವಿಜಯಪುರ ನಗರದ ವಾರ್ಡ್ 15ರ ಖಾವಿ ಪ್ಲಾಟ್‌ನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಯಾಗಿರುವುದನ್ನು ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಪರಿಶೀಲಿಸಿದರು   

ವಿಜಯಪುರ: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಚರಂಡಿಗಳ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿರುವ ನಗರದ ವಾರ್ಡ್ 15ರ ಖಾವಿ ಪ್ಲಾಟ್‌ಗೆ ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಭೇಟಿ ನೀಡಿ ಪರಿಶೀಲಿಸಿದರು.

ಮಳೆ ನೀರು ಸರಾಗವಾಗಿ ಹೋಗಲು ಅನುಕೂಲವಾಗುವಂತೆ ಚರಂಡಿ ನಿರ್ಮಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಸಹಾಯಕ ಎಂಜಿನಿಯರ್ ಸುನೀಲ್ ಹಿರೇಣಿ, ಶೇಖರ್ ಮಾಳಿ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.