ವಿಜಯಪುರ: ನಗರದಲ್ಲಿ ಜನವರಿ 17ರಂದು ಮಧ್ಯರಾತ್ರಿ ಯುವತಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ತಿಳಿಸಿದ್ದಾರೆ.
ನಗರದ ನಿವಾಸಿಗಳಾದ ಅಯಾಜ್ ಅಹಮದ್ ಜಮಾದಾರ, ಉಮರ್ ಫಾರೂಕ್ ಮತ್ತು ರಾಹಿಲ್ ಬಂಧಿತ ಆರೋಪಿಗಳಾಗಿದ್ದಾರೆ ಎಂದರು.
ಜನವರಿ 17ರಂದು ರಾತ್ರಿ ಯುವತಿಯು ಇಂಡಿಗೆ ಹೋಗುವ ಬಸ್ಗಾಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಆರೋಪಿಗಳು, ಯುವತಿಯನ್ನು ಪುಸಲಾಯಿಸಿ ಸೆಟಲೈಟ್ ಬಸ್ ನಿಲ್ದಾಣಕ್ಕೆ ಬಿಡುವುದಾಗಿ ಹೇಳಿಕೆ ಕರೆದುಕೊಂಡು ಹೋಗಿ ಪಕ್ಕದ ತರಕಾರಿ ಮಾರುಕಟ್ಟೆ ಬಳಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ್ದರು ಎಂದರು.
ಅತ್ಯಾಚಾರಕ್ಕೆ ಒಳಗಾದ ಯುವತಿ ಮಾನಸಿಕ ಅಸ್ವಸ್ಥೆಯಾಗಿದ್ದು, ಕೇಂದ್ರ ಬಸ್ ನಿಲ್ದಾಣದಿಂದ ಸೆಟಲೈಟ್ ಬಸ್ ನಿಲ್ದಾಣದಲ್ಲಿ ಬಿಡುವುದಾಗಿ ಕರೆದೊಯ್ದು ಆರೋಪಿಗಳು ಅತ್ಯಾಚಾರ ಎಸಗಿದ್ದರು. ಸಿಸಿ ಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿಗಳು ಚಲಾಯಿಸಿದ್ದ ಬೈಕ್ ನಂಬರ್ ಆಧರಿಸಿ ಬಂಧಿಸಲಾಗಿದೆ ಎಂದು ಹೇಳಿದರು.
ಕ್ರಮಕ್ಕೆ ಆಗ್ರಹ:
ಯುವತಿ ಮೇಲೆ ಅತ್ಯಾಚಾರ ಮಾಡಿದ ಕಾಮುಕರನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖಂಡ ನೀಲಕಂಠ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.