ADVERTISEMENT

ನಿಂಬೆ ಸಂಸ್ಕರಣಾ ಘಟಕಕ್ಕೆ ₹2.5 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 4:09 IST
Last Updated 23 ಏಪ್ರಿಲ್ 2023, 4:09 IST
ಇಂಡಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ನಡೆದ ವಸ್ತು ಪ್ರದರ್ಶನ ಮತ್ತು ಮಾರಾಟ ವಿಭಾಗದ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಲಪತಿ ಪಿ.ಎಲ್. ಪಾಟೀಲ ಮಾತನಾಡಿದರು
ಇಂಡಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ನಡೆದ ವಸ್ತು ಪ್ರದರ್ಶನ ಮತ್ತು ಮಾರಾಟ ವಿಭಾಗದ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಲಪತಿ ಪಿ.ಎಲ್. ಪಾಟೀಲ ಮಾತನಾಡಿದರು   

ಇಂಡಿ: ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಟ್ಟಲಾಗುವ ನಿಂಬೆ ಸಂಸ್ಕಾರಣಾ ಘಟಕಕ್ಕೆ ₹2.5 ಕೋಟಿ ಬಿಡುಗಡೆಯಾಗಿದ್ದು, ಸದ್ಯದಲ್ಲಿಯೇ ಕಟ್ಟಡ ಕಾರ್ಯ ಪ್ರಾರಂಭಿಸಲಾಗುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಹೇಳಿದರು.

ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ವಿಭಾಗದ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ದ್ವಿತೀಯ ಕೃಷಿ ಪದ್ಧತಿ ಅನುಸರಿಸುತ್ತಿದ್ದು, ಕೃಷಿ ಉತ್ಪಾದನೆಯಲ್ಲಿ ಮೌಲ್ಯ ವರ್ಧನಕ್ಕೆ ಹೆಚ್ಚಿನ ಪ್ರೋತ್ಸಾಹಿಸಲಾಗುತ್ತಿದೆ. ನಿಂಬೆ ಮೌಲ್ಯವರ್ಧನೆ ಮುಖಾಂತರ ನಿಂಬೆ ರಸ, ಉಪ್ಪಿನಕಾಯಿ, ಕ್ಯಾಂಡಿ ಸೇರಿದಂತೆ ಹತ್ತು ಹಲವು ಪ್ರಕಾರದ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದು ಎಂದರು.

ADVERTISEMENT

ಯುವಕರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಿಂಬೆ ಮೌಲ್ಯವರ್ಧನೆ ಕುರಿತು ತರಬೇತಿ ನೀಡಲಾಗುವುದು ಮತ್ತು ರೈತರು ನಿಂಬೆ ತಂದು ಸಂಸ್ಕರಣೆ ಮಾಡಿಕೊಳ್ಳಬಹುದು. ಸರ್ಕಾರ ಒಂದು ಜಿಲ್ಲೆ ಒಂದು ಬೆಳೆ ಆಯ್ಕೆ ಮಾಡಿದ್ದು, ವಿಜಯಪುರ ಜಿಲ್ಲೆಗೆ ನಿಂಬೆ ವಿಜಯಪುರ ಜಿಲ್ಲೆಯ ಬೆಳೆಯಾಗಿ ಆಯ್ಕೆಯಾಗಿದೆ ಎಂದರು.

ಬೀಜೋತ್ಪಾದನೆ ಮಾಡಿದರೆ ರೈತರು ಆದಾಯ ಹೆಚ್ಚಿಸಿಕೊಳ್ಳಬಹುದು. ಧಾರವಾಡ ಕೇಂದ್ರ ವಿಶ್ವದಲ್ಲಿಯೇ ಬೀಜೋತ್ಪಾದನೆಗೆ ಮೊದಲ ಸ್ಥಾನದಲ್ಲಿದೆ. ಮಣ್ಣಿನ ಮಾದರಿ ಪರೀಕ್ಷಿಸಿ ಮಣ್ಣಿನ ಗುಣಧರ್ಮ, ಕ್ಷಾರ, ಪೋಷಕಾಂಶಗಳ ಕೊರತೆ, ಯಾವ ಬೆಳೆಗೆ ಎಷ್ಟು ಗೊಬ್ಬರ ಹಾಕಬೇಕು ಎನ್ನುವುದರ ಬಗ್ಗೆ ಸಲಹೆ ನೀಡಲಾಗುತ್ತದೆ ಎಂದರು.

ಸಂಶೋಧನಾ ನಿರ್ದೇಶಕ ಬಿ.ಡಿ.ಬಿರಾದಾರ, ವಿಸ್ತರಣಾ ನಿರ್ದೇಶಕ ಎ.ಎಸ್. ವಸ್ತ್ರದ, ಬೀಜ ಘಟಕದ ಮುಖ್ಯ ಅಧಿಕಾರಿ ರವಿ ಹಂಜಿ, ಪ್ರಗತಿಪರ ರೈತ ಅವಿನಾಶ ದೇಶಪಾಂಡೆ ಮತ್ತು ಕೆವಿಕೆ ಮುಖ್ಯಸ್ಥ ಡಾ.ಶಿವಶಂಕರ ಮೂರ್ತಿ, ಡಾ.ಸವಿತಾ ಮಾತನಾಡಿದರು. ಡಾ.ವೀಣಾ ಚಂದಾವರಿ, ಡಾ.ಪ್ರಕಾಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.