ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಮೂರು ದಿನ ಪೂರೈಸಿದ್ದು, ಜಿಲ್ಲೆಯಾದ್ಯಂತ ಸಾರಿಗೆ ಬಸ್ಗಳ ಸಂಚಾರ ಸ್ಥಗಿತವಾಗಿತ್ತು.
ಪ್ರಯಾಣಿಕರಿಗೆ ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಸಾರಿಗೆ ಅಧಿಕಾರಿ ವರ್ಗ ಸ್ವತ: ಮುಂದೆ ನಿಂತು ನಗರದ ಕೇಂದ್ರ ಬಸ್ ನಿಲ್ದಾಣದಿಂದಲೇಖಾಸಗಿ ಬಸ್, ಇತರೆ ವಾಹನಗಳ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಿದರು. ಹುಬ್ಬಳ್ಳಿ, ಅಥಣಿ, ಜಮಖಂಡಿ ಸೇರಿದಂತೆ ವಿವಿಧ ನಗರಗಳಿಗೆ ಖಾಸಗಿ ಬಸ್ಗಳು ಓಡಿದವಾದರೂ ಮುಷ್ಕರದ ಹಿನ್ನೆಲೆಯಲ್ಲಿ ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್ಗಳಲ್ಲಿ ಸಂಚರಿಸಿದರು.ಪೊಲೀಸ್ ಭದ್ರತೆಯನ್ನು ಒದಗಿಸಿದ್ದರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳುಸಾರಿಗೆ ಇಲಾಖೆಯನಿವೃತ್ತ ಚಾಲಕ, ನಿರ್ವಾಹಕರನ್ನುತಾತ್ಕಾಲಿಕವಾಗಿ ಕೆಲಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಈ ಸಂಬಂಧ 53 ಚಾಲಕ ಮತ್ತು 18 ನಿರ್ವಾಹಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕರೆಪತ್ರವನ್ನು ಕಳುಹಿಸಿಹಾಗೂ ಷರತ್ತುಗಳನ್ನು ತಿಳಿಸಿ ಅವರ ಮನವೊಲಿಸುವ ಕಾರ್ಯ ಮಾಡಲಾಗಿದೆ. ನಾಳೆ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ‘ಪ್ರಜಾವಾಣಿ’ಗೆ ತಿಳಿಸಿದರು.
ಶುಕ್ರವಾರ 194 ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು,ಶ್ರೀಶೈಲಕ್ಕೆ 50 ಬಸ್ಸುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಜಿಲ್ಲೆಯೊಳಗೆ 47 ಬಸ್ಗಳು ಕಾರ್ಯಾಚರಣೆ ನಡೆಸಿವೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.