ADVERTISEMENT

ವಿಜಯಪುರ: ಬಿಜೆಪಿ ಅಭಿಯಾನಕ್ಕೆ ಸಚಿವೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 15:16 IST
Last Updated 10 ಮೇ 2021, 15:16 IST
ವಿಜಯಪುರದಲ್ಲಿ ಸೋಮವಾರ ನಡೆದ ‘ಐ ಆ್ಯಮ್‌ ನ್ಯೂ ಇಂಡಿಯಾ’ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು
ವಿಜಯಪುರದಲ್ಲಿ ಸೋಮವಾರ ನಡೆದ ‘ಐ ಆ್ಯಮ್‌ ನ್ಯೂ ಇಂಡಿಯಾ’ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು   

ವಿಜಯಪುರ: ಕೊರೋನಾ ಸಂದರ್ಭದಲ್ಲಿ ನಾವೆಲ್ಲರೂ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರೊಂದಿಗೆ ದೇಶ ಸೇವೆಯಲ್ಲಿ ಪಾಲ್ಗೊಳ್ಳೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬಿಜೆಪಿಯಿಂದ ಸೋಮವಾರದಿಂದ ಪ್ರಾರಂಭವಾದ ‘ಐ ಆ್ಯಮ್‌ ನ್ಯೂ ಇಂಡಿಯಾ’ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‌ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ಮಿಸ್ಡ್‌ ಕಾಲ್‌ ಕೊಡುವುದರೊಂದಿಗೆ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮತ್ತು ವಿಜಯಪುರ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ಸಂದೀಪ್ ಪಾಟೀಲ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.