ADVERTISEMENT

‘ವಿಮಾನ ನಿಲ್ದಾಣಕ್ಕೆ ಆದ್ಯತೆ’

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 17:10 IST
Last Updated 13 ಜೂನ್ 2019, 17:10 IST
ವಿಜಯಪುರದಲ್ಲಿ ಗುರುವಾರ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ಸಂಸದ ರಮೇಶ ಜಿಗಜಿಣಗಿ ಅವರನ್ನು ಸನ್ಮಾನಿಸಲಾಯಿತು
ವಿಜಯಪುರದಲ್ಲಿ ಗುರುವಾರ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ಸಂಸದ ರಮೇಶ ಜಿಗಜಿಣಗಿ ಅವರನ್ನು ಸನ್ಮಾನಿಸಲಾಯಿತು   

ವಿಜಯಪುರ: ‘ವಿಮಾನ ನಿಲ್ದಾಣ, ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದ ಮರ್ಚಂಟ್ಸ್‌ ಅಸೋಸಿಯೇಷನ್‌ನ ಮಂಗಲ ಕಾರ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಘದ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಅವರು, ಕಟ್ಟಡ ನಿರ್ಮಾಣಕ್ಕಾಗಿ ಭಾರತ ಪ್ರಾಚ್ಯವಸ್ತು ಇಲಾಖೆಯ ಕಾನೂನಿಂದ ಅಡಚಣೆ ಆಗುತ್ತಿದ್ದು ಅದನ್ನು ರದ್ದುಪಡಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.

ADVERTISEMENT

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ವಿಜಯಕುಮಾರ ಪಾಟೀಲ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.