ಕರ್ನಾಟಕ ಲೋಕಾಯುಕ್ತ
ವಿಜಯಪುರ: ಮುಳವಾಡ ಗ್ರಾಮದ ಕೆಐಡಿಬಿ ನಿವೇಶನದ ಇ–ಸೊತ್ತು ಉತಾರೆ ಮಾಡಿಕೊಡಲು ₹10 ಸಾವಿರ ಲಂಚ ತೆಗೆದುಕೊಳ್ಳುತ್ತಿರುವಾಗ ಲೋಕಾಯುಕ್ತ ಬಲೆಗೆ ಮುಳವಾಡ ಗ್ರಾಮ ಪಂಚಾಯ್ತಿ ದ್ವಿತೀಯ ದರ್ಜೆ ಸಹಾಯಕ ಮಲ್ಲಪ್ಪ ಸಾಬು ಹೊಸಕೇರಿ ಮಂಗಳವಾರ ಸಿಕ್ಕಿ ಬಿದ್ದಿದ್ದಾನೆ.
ಮುಳವಾಡ ಗ್ರಾಮ ಪಂಚಾಯ್ತಿ ಆವರಣದಲ್ಲಿ ಲಂಚದ ಹಣ ಸಹಿತ ಆರೋಪಿ ಸಿಕ್ಕಿಬಿದ್ದಿರುವುದಾಗಿ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.