ADVERTISEMENT

ವಿಜಯಪುರ ಪಾಲಿಕೆ ಚುನಾವಣೆಗೆ ಎಸ್‍ಡಿಪಿಐ ಸ್ಪರ್ಧೆ: ಅಫ್ಸರ್

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 16:13 IST
Last Updated 10 ಅಕ್ಟೋಬರ್ 2022, 16:13 IST
ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಪೂರ್ವಭಾವಿಯಾಗಿ ನಡೆದ ಎಸ್‍ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿದರು
ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಪೂರ್ವಭಾವಿಯಾಗಿ ನಡೆದ ಎಸ್‍ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿದರು   

ವಿಜಯಪುರ: ಪಾಲಿಕೆ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಕಣಕ್ಕಿಳಿಸಲಿರುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಟಿಬದ್ದರಾಗಿ ಕಾರ್ಯನಿರ್ವಹಿಸಲು ತಯಾರಾಗಬೇಕು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದರು.

ಚುನಾವಣಾ ಪೂರ್ವಭಾವಿಯಾಗಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಕೆಲವು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಸಲ್ಲಿಸಲಾಗಿದೆ. ಇನ್ನುಳಿದ ಅಭ್ಯರ್ಥಿಗಳನ್ನು ಮುಂದಿನ ಎರಡು ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಮೂರೂವರೆ ವರ್ಷಗಳ ಹಿಂದೆಯೇ ಪಾಲಿಕೆ ಅವಧಿ ಮುಗಿದಿದ್ದರೂ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡನೆ ನೆಪದಲ್ಲಿ ಈ ಸರ್ಕಾರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಕಾಂಗ್ರೆಸ್ - ಜೆಡಿಎಸ್ ಮತ್ತು ಬಿಜೆಪಿ ಮುಂದೂಡುತ್ತಲೇ ಬಂದಿವೆ. ಹಾಗಾಗಿ ಸ್ಥಳೀಯವಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ಭ್ರಷ್ಟ ಚಾರ ತಾಂಡವವಾಡುತ್ತಿದೆ . ಎಂದು ಅವರು ಆರೋಪಿರು.

ADVERTISEMENT

ಈ ಸಂಚಿನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರೂ ಪಕ್ಷಗಳ ಕೈವಾಡವಿದೆ ಎಂದ ಅವರು ದೂರಿದರು.

ಸ್ಥಳೀಯ ಶಾಸಕರ ಲಾಭಿಯಿಂದಾಗಿ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ನಿರಂತರ ಮುಂದೂಡಲಾಯಿತು ಎಂದರು.

ರಾಜ್ಯ ಮುಖಂಡರಾದ ಅಕ್ರಂ ಹಸನ್ ಉಳ್ಳಾಲ್ ಮಾತನಾಡಿ, ಎಸ್‍ಡಿಪಿಐ ಕಳೆದ 13 ವರ್ಷಗಳಿಂದ ದೇಶದ 15 ರಾಜ್ಯಗಳಲ್ಲಿ ಸಕ್ರಿಯವಾಗಿ ಚುನಾವಣೆ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದೆ. ಕರ್ನಾಟಕದಲ್ಲಿ ಪಕ್ಷದ ಕಡೆಯಿಂದ 300ಕ್ಕೂ ಹೆಚ್ಚು ಕಾರ್ಪೊರೇಟರ್, ಕೌನ್ಸಿಲ್ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆದ್ದಿದ್ದಾರೆ. ಪಕ್ಷ 20ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ ಮತ್ತು ಕೆಲವು ಕಡೆ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿದೆ ಎಂದರು.

ರಾಜ್ಯದ ಮೂರೂ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಅಭಿವೃದ್ಧಿಗಾಗಿ ಎಸ್‍ಡಿಪಿಐ ಪಕ್ಷದ ಕಡೆ ಒಲವು ತೋರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಕಾರ್ಯಕರ್ತರ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಅತಾವುಲ್ಲಾ ದರಾಕ್ಷಿ, ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಇಬ್ರಾಹಿಂ ಪಠಾಣ, ಜಿಲ್ಲಾ ಉಸ್ತುವಾರಿ ರಫೀಕ್ ಅಹ್ಮದ್ ಮತ್ತು ನಗರ ವ್ಯಾಪ್ತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.