ADVERTISEMENT

ಕೋವಿಡ್‌ ಎರಡನೇ ಡೋಸ್: ಅರಿವು ಮೂಡಿಸಲು ಜಿಲ್ಲಾಧಿಕಾರಿ ಕರೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 15:42 IST
Last Updated 4 ಸೆಪ್ಟೆಂಬರ್ 2021, 15:42 IST
ಪಿ.ಸುನೀಲ್ ಕುಮಾರ್
ಪಿ.ಸುನೀಲ್ ಕುಮಾರ್   

ವಿಜಯಪುರ: ಮೊದಲನೇ ಲಸಿಕೆ ಪಡೆಯದ ಅರ್ಹ ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಪಡೆಯಬೇಕಾದವರಿಗೆ ಆದಷ್ಟು ಶೀಘ್ರ ಲಸಿಕೆ ಹಾಕಿಸಿಕೊಳ್ಳುವಂತೆ ಮನೆಮನೆಗೆ ತೆರಳಿ ತಿಳಿಹೇಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್‌ ಅವರು ಅಧಿಕಾರಿಗಳು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌ ಎರಡನೇ ಲಸಿಕೆ ಕುರಿತು ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ನೋಡಲ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರ ಮಾತನಾಡಿದರು.

ಹೆಚ್ಚಿನ ಸಿಬ್ಬಂದಿ ಬಳಸಿಕೊಂಡು ಲಸಿಕಾಕರಣದಲ್ಲಿ ಪ್ರಗತಿ ಸಾಧಿಸಿ ಮತ್ತು ಸಂಬಂಧಪಟ್ಟ ಇಲಾಖೆಗಳ ಸಹಕಾರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

ADVERTISEMENT

ಎರಡನೇ ಲಸಿಕೆ ಪಡೆಯುವಂತೆ ದೂರವಾಣಿ ಮುಖಾಂತರವೂ ಕರೆ ಮಾಡಿ ತಿಳಿಸಬೇಕು ಎಂದು ಸೂಚಿಸಿದರು.

ಮೂರನೇ ಅಲೆ ಬರುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಗಡಿ ಭಾಗದ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಹೇಳಬೇಕು ಹಾಗೂ ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಪೋಸ್ಟರ್‌ ಹಾಗೂ ದಿನ ಪತ್ರಿಕೆಗಳ ಮೂಲಕಲಸಿಕೆ ಪಡೆಯುವಂತೆ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದಲ್ಲಿ ಒಟ್ಟು ಗುರಿ 2,18,413 ಅರ್ಹ ಫಲಾನುಭವಿಗಳಿಗೆ ಲಸಿಕಾರಣ ನೀಡುವ ಗುರಿ ಹೊಂದಿದ್ದು, ಮೊದಲನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ 1,84,095(ಶೇ 84.29) ಹಾಗೂ ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ 61,179(ಶೇ 33.23) ಆಗಿದೆ ಎಂದರು.

ಸಭೆಯಲ್ಲಿ ವಿಜಯಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ಕವಿತಾ, ಆರ್.ಸಿ.ಎಚ್ ಅಧಿಕಾರಿ ಡಾ.ಮಹೇಶ್ ನಾಗರಬೆಟ್ಟ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.