ADVERTISEMENT

ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರಸ್ವಾಮಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 18:46 IST
Last Updated 20 ನವೆಂಬರ್ 2025, 18:46 IST
ಎಂ.ಶಿವಕುಮಾರಸ್ವಾಮಿ
ಎಂ.ಶಿವಕುಮಾರಸ್ವಾಮಿ   

ಸಿಂದಗಿ (ವಿಜಯಪುರ ಜಿಲ್ಲೆ): ಶಿವಯೋಗಿ ಶಿವಾಚಾರ್ಯರ ಸ್ಮರಣಾರ್ಥ ಎನ್.ಚೆನ್ನಯ್ಯಸ್ವಾಮಿ ಮತ್ತು ಶಾರದಾದೇವಿ ಜನಕಲ್ಯಾಣ ಫೌಂಡೇಶನ್‌ನಿಂದ ನೀಡಲಾಗುವ 2025-26ನೇ ಸಾಲಿನ ಶಿವಯೋಗಿ ಶಿವಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಸಂಸ್ಕೃತ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎಂ.ಶಿವಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

‘ಪ್ರಶಸ್ತಿಯು ₹ 1 ಲಕ್ಷ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪಟ್ಟಣದ ಸಾರಂಗಮಠದ ಸಭಾಮಂಟಪದಲ್ಲಿ ನವೆಂಬರ್ 23ರ ಸಂಜೆ 6-30ಕ್ಕೆ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಮತ್ತು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ಪ್ರತಿಷ್ಠಾನದ ಸಂಚಾಲಕ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT