ADVERTISEMENT

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಶಿವರಾಜ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 14:18 IST
Last Updated 2 ಆಗಸ್ಟ್ 2022, 14:18 IST
ಶಿವರಾಜ್ ಬಿರಾದಾರ
ಶಿವರಾಜ್ ಬಿರಾದಾರ   

ವಿಜಯಪುರ:ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆಶಿವರಾಜ್ ಬಿರಾದಾರ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ಸಹ ಶಿಕ್ಷಕರು ತೋರಿದ ವಿಶ್ವಾಸದ ಫಲವಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅವರ ಸೇವಕನಾಗಿ ದುಡಿಯುವೆ, ಹಿರಿಯ ಶಿಕ್ಷಕರ, ಸಂಘದ ಪದಾಧಿಕಾರಿಗಳೆಲ್ಲರ ಮಾರ್ಗದರ್ಶನದಲ್ಲಿ ನನ್ನ ಜವಾಬ್ದಾರಿ ನಿಭಾಯಿಸುವೆ ಎಂದು ಬಿರಾದಾರ ಹೇಳಿದ್ದಾರೆ.

ಶಿಕ್ಷಕರಿಗೆ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿ, ಇಲಾಖೆ ಹಾಗೂ ಶಿಕ್ಷಕರ ನಡುವೆ ಸೇತುವೆಯಾಗಿ, ಶಿಕ್ಷಕರಿಗೆ ಸೇವೆ ಸಲ್ಲಿಸುವುದೇ ನನ್ನ ಗುರಿ. ಕಿರಿಯನಾದ ನನ್ನನ್ನು ಪ್ರೌಢಶಾಲಾ ಶಿಕ್ಷಕ ಬಂಧುಗಳು ಈ ಜವಾಬ್ದಾರಿಯನ್ನು ಹೆಗಲಿಗೇರಿಸಿದ್ದಾರೆ, ಈ ಜವಾಬ್ದಾರಿಯ ನೊಗವನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.

ADVERTISEMENT

ಕೇಂದ್ರ ಸರ್ಕಾರದ ಮಾದರಿಯ ವೇತನದಲ್ಲಿ ಪ್ರೌಢಶಾಲಾ ಶಿಕ್ಷಕರ ವೇತನವನ್ನು ಹೆಚ್ಚಳಕ್ಕೆ ಹೋರಾಟ,ಸ್ಥಗಿತಗೊಂಡಿರುವ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಹುದ್ದೆಗೆ ಪ್ರೌಢಶಾಲಾ ಸಹ ಶಿಕ್ಷಕರಿಂದ ಬಡ್ತಿಯನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡುವುದು, 01-08-2008ರ ನಂತರದಲ್ಲಿ ನೇಮಕಾತಿ ಹೊಂದಿದ ಪ್ರೌಢಶಾಲಾ ಶಿಕ್ಷಕರಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಬಡ್ತಿ ಹೊಂದಿದ ಶಿಕ್ಷಕರಿಗೆ ಕಾಲಮಿತಿ ವೇತನ ಬಡ್ತಿ, ಸ್ವಯಂಚಾಲಿತ ವೇತನ ಬಡ್ತಿಯ ತಾರತಮ್ಯವನ್ನು ಸರಿಪಡಿಸುವುದು ಸೇರಿದಂತೆ ಅನೇಕ ರೀತಿಯ ಪ್ರೌಢಶಾಲಾ ಶಿಕ್ಷಕರ ಪರವಾದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವುದಾಗಿ ಶಿವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.