ADVERTISEMENT

ಗುಂಡಿನ ದಾಳಿ ಪ್ರಕರಣ; ಮತ್ತೆ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 16:52 IST
Last Updated 8 ನವೆಂಬರ್ 2020, 16:52 IST

ವಿಜಯಪುರ: ಕಾಂಗ್ರೆಸ್ ಮುಖಂಡ, ಭೀಮಾ ತೀರದ ರೌಡಿ ಶೀಟರ್ಮಹಾದೇವಸಾಹುಕಾರಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ರಾಜರತ್ನ ಕಾಲೊನಿಯ ಕಾಶೀನಾಥ ಭೀಮಪ್ಪ ತಾಳಿಕೋಟಿ (23), ಕುಂಬಾರ ಓಣಿಯ ರಾಜು ಉರ್ಫ್ ರಾಜಅಹ್ಮದ್ ರಜಾಕಸಾಬ್ ಗುನ್ನಾಪುರ (27), ಯೋಗಾಪುರ ಕಾಲೊನಿಯ ಸಿದ್ದು ಉರ್ಫ್ ಶಹಾಪೇಟಿ ಸಿದ್ದು ಗುರುಪಾದಪ್ಪ ಮೂಡಂಗಿ (ಮೂಡಲಗಿ) (24), ಸಾರವಾಡದ ಯುನುಸ್ ಅಲಿ ಹುಸೇನಸಾಬ್ ಮುಜಾವರ (24) ಬಂಧಿತ ಆರೋಪಿಗಳು.

ಬಂಧಿತರಿಂದ ಒಂದು ಮಚ್ಚು, ಎರಡುಮೊಬೈಲ್ಹಾಗೂ ಎರಡು ಮೋಟಾರ್ ಸೈಕಲ್‍ಗಳನ್ನು ವಶಡಿಸಿಕೊಳ್ಳಲಾಗಿದೆ. ಈಗಾಗಲೇ ಏಳು ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟು 11 ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತಂಡ ರಚಿಸಿ, ತಪಾಸಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.