ADVERTISEMENT

ಕಿರಾಣಿ ಅಂಗಡಿಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 15:29 IST
Last Updated 4 ಏಪ್ರಿಲ್ 2020, 15:29 IST

ವಿಜಯಪುರ: ಹೆಚ್ಚಿನ ದರಕ್ಕೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಚಿಲ್ಲರೆ ಹಾಗೂ ಸಗಟು ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳ ತಂಡವು, ಅಂಗಡಿಗಳನ್ನು ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಗರದ ಕಿರಾಣಿ ಬಾಜಾರದಲ್ಲಿರುವ ನಾರಾಯಣಮಲ್ಲ ಬೇರುಪಜಿ ಬಾಫನಾ ಹಾಗೂ ಇಬ್ರಾಹಿಂಪೂರ ರೇಲ್ವೆಗೇಟ್ ಹತ್ತಿರದ ಬಸವರಾಜ ಕಿರಾಣಿ ಅಂಗಡಿ ಮತ್ತು ರಾಹುಲ್ ಕಿರಾಣಿ ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ₹ 4.05 ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಸಗಟು ಹಾಗೂ ಚಿಲ್ಲರೆ ಕಿರಾಣಿ ಅಂಗಡಿಯವರು ಗ್ರಾಹಕರಿಂದ ಹೆಚ್ಚಿನ ದರವನ್ನು ಪಡೆಯದಂತೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಹೆಚ್ಚಿನ ದರ ಪಡೆಯುವುದು ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.