ADVERTISEMENT

ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಭಾರತ ರತ್ನ ಸಿಗಬೇಕು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 11:31 IST
Last Updated 3 ಫೆಬ್ರುವರಿ 2024, 11:31 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ವಿಜಯಪುರ: ‘ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ’ ಎಂದು ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಹೇಳಿದರು.

ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಶನಿವಾರ ಪೂಜೆ ಸಲ್ಲಿಸಿದ ನಂತರ, ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು  ಪ್ರತಿಕ್ರಿಯಿಸಿದರು.

ADVERTISEMENT

‘ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಅವರಿಗೆ ಬಿಟ್ಟಿದೆ’ ಎಂದು ಹೇಳಿದರು.

ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಸವಣ್ಣನವರ ಪ್ರತಿಮೆಗೆ ಡಿಸಿಎಂ ಪುಷ್ಪನಮನ ಸಲ್ಲಿಸಿದರು.

ಸಚಿವ ಶಿವಾನಂದ ಪಾಟೀಲ,  ಶಾಸಕ ಅಶೋಕ ಮನಗೂಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.