ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ಆರು ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ರಾಹುಲ್ ಸಿಂಧೆ ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಅಶೋಕ ಮನಗೂಳಿ, ಜೆಡಿಎಸ್ನಿಂದ ನಾಜಿಯಾ ಅಂಗಡಿ, ಬಿಜೆಪಿ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಡಾ.ಸುನೀಲ್ಕುಮಾರ್ ಹೆಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಜಿಲಾನಿ ಗುಡುಸಾಬ್ ಮುಲ್ಲಾ ಹಾಗೂ ದೀಪಿಕಾ ಎಸ್. ಪಡಸಲಗಿ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದಬುಧವಾರ ರಾಷ್ಟ್ರೀಯ ಸಮಾಜ ಪಕ್ಷದ ವಿಕ್ರಮ ಪಂಡಿತ ಹಾಗೂ ಪಕ್ಷೇತರ ಅಭ್ಯರ್ಥಿಯಾದ ಅಬ್ದುಲ್ ರಹಿಮಾನ್ದುಂಡಸಿ ಅವರು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಂಡರು.
ಮತದಾನ ಅ.30ರಂದು ನಡೆಯಲಿದ್ದು, ಮತ ಎಣಿಕೆಯು ನ.2 ರಂದು ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.